ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥
ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…