ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.
ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…