News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

157

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…