ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

150

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…