ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.
ಸಿಆರ್ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.
ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…