ಸುದ್ದಿ

ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

33

ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.

ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್‍ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್‌ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.

ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್‍ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್‍ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್‌ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.