ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.
ಸಿಆರ್ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.
ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…