ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.
ಸಿಆರ್ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.
ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….