ಸುದ್ದಿ

‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

46

ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು.


ಈ ಬಗ್ಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಪ್ರತಿಷ್ಠಾನದ ಮುಕ್ಯಸ್ಥೆ ಸುದಾ ಮೂರ್ತಿ, ನಮ್ಮ ಸಂಸ್ಥೆ FCRA ಅಡಿಯಲ್ಲಿ ಬರುವುದಿಲ್ಲ. 2016ರಲ್ಲಿ ಕಾಯ್ದೆಗೆ ತಿದ್ದುಪಡಿಯಾಗಿದೆ. ಈ ಬಗ್ಗೆ ಇಲಾಖೆಗೆ ತಿಳಿಸಲಾಗಿದೆ ಎಂದು ಕಾರ್ಪೊರೆಟ್ ವ್ಯವಹಾರಗಳ ಸಂವಹನ ವಿಭಾಗದ ರಿಷಿ ಬಸು ಎಂದು ಪ್ರತಿಕ್ರಿಯಿಸಿದ್ದಾರೆ.


ಜನವರಿ 2016ರಲ್ಲಿ ಇನ್ಫೋಸಿಸ್ ಸಂಸ್ಥೆ FCRA ಕಾಯ್ಡೆಯಡಿಯಲ್ಲಿತ್ತು. ಆದರೆ, ಮೇ 2016ರಲ್ಲಿ ಈ ಕಾಯ್ದೆಯಡಿಯಿಂದ ಹೊರ ಬಂದಿದೆ. ಸದರಿ ಕಾಯ್ದೆಗೆ 2010ರಲ್ಲಿ ತಿದ್ದುಪಡಿಯಾಗಿದೆ. ಹೀಗಾಗಿ, ನಮ್ಮ ಸಂಸ್ಥೆ ಈ ಕಾಯ್ಡೆಯಡಿಯಲ್ಲಿ ಬರುವುದಿಲ್ಲ. ಸತತ ಮನವಿ ನಂತರ 2016ರಲ್ಲಿ FCRA ಕಾಯ್ಡೆಯಡಿ ಬರುವ ಎನ್ ಜಿಒಗಳ ಪಟ್ಟಿಯಿಂದ ಇನ್ಫೋಸಿಸ್ ಹೊರ ಬಂದಿದೆ. ಈ ಕುರಿತಂತೆ ಸರ್ಕಾರ ನೀಡಿದ ಪತ್ರವು ನಮ್ಮ ಬಳಿ ಇದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ವಕ್ತಾರರು ಹೇಳಿದ್ದಾರೆ.

2016 ರಿಂದ 2018ರ ಆರ್ಥಿಕ ವರ್ಷದ ತನಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲಾಗಿದೆ. ಮೇಲ್ಕಂಡ ಕಾಯ್ದೆಯಡಿಯಿಂದ ಹೊರಬಂದಿರುವುದರಿಂದ ಈ ಬಗ್ಗೆ ಯಾವುದೇ ದಾಖಲೆ ಒದಗಿಸಿಲ್ಲ. ವಿದೇಶದಿಂದ ದೇಣಿಗೆ ಪಡೆಯುತ್ತಿಲ್ಲ ಎಂದು ತೋರಿಸಲು ಜುಲೈ 2018ರಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸರ್ಕಾರಕ್ಕೆ ದಾಖಲೆ ನೀಡಲಾಗಿದೆ. ಇದಾದ ಬಳಿಕ ಏಪ್ರಿಲ್ 2018ರ ನಂತರ FCRA ಆಡಿಯಲ್ಲಿ ರಿಟರ್ನ್ಸ್ ಸಲ್ಲಿಸುವಂತೆ ಇಲಾಖೆಯಿಂದ ಇನ್ಫೋಸಿಸ್ ಫೌಂಡೇಷನ್ ಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ರಿಷಿ ಬಸು(ರಾಜರ್ಷಿ ಬಸು) ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…