ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ.

ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹಂತ 3, 4, ಹಾಗೂ 5ರಲ್ಲಿ ಬರುವ ಉದ್ಯೋಗಿಗಳ ಪೈಕಿ ಶೇ. 2-5ರಷ್ಟು ನೌಕರರೂ ಕೂಡಾ ಕೆಲಸ ಕಳೆದುಕೊಳ್ಳಲಿದ್ದಾರೆ. ಇನ್ಫೋಸಿಸ್ನಲ್ಲಿ ಸದ್ಯ ಮಧ್ಯಮ ಕ್ರಮಾಂಕದಲ್ಲಿ ಸರಿಸುಮಾರು 1 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ.2 ರಿಂದ 5ರಷ್ಟು ಮಂದಿಯನ್ನು ಸಂಸ್ಥೆ ಕೆಲಸದಿಂದ ಕಿತ್ತುಹಾಕಲು ಹೊರಟರೆ, ಸುಮಾರು 4 ರಿಂದ10 ಸಾವಿರ ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ.

ಅಷ್ಟೇ ಅಲ್ಲ, ಹಿರಿಯ ಕಾರ್ಯನಿರ್ವಾಹಕ ಹುದ್ದೆಯಡಿ ಬರುವ ಸಹಾಯಕ ಉಪಾಧ್ಯಕ್ಷರು,ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಿಗೂ ಕೆಲಸ ಬಿಡುವಂತೆ ಇನ್ಫೋಸಿಸ್ ಹೇಳಿದೆ. ಅಂದರೆ ಈ ಹಂತದ ಒಟ್ಟು 50 ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ. ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಇನ್ಫೋಸಿಸ್ ಇದೊಂದು ಆಂತರಿಕ ಪ್ರಕ್ರಿಯೆ ಎಂದು ಹೇಳಿದೆ. ಸಾಮೂಹಿಕವಾಗಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂದು ಪರಿಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟನೆ ನೀಡಿರುವ ಇನ್ಫೋಸಿಸ್, ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿರೋದಾಗಿ ಹೇಳಿದೆ.

ಹಾಗೆ ನೋಡಿದ್ರೆ, ಕಳೆದ ಕೆಲವು ವರ್ಷಗಳಿಂದ ಇನ್ಫೋಸಿಸ್ನಲ್ಲಿ ಸಾಮೂಹಿಕ ಉದ್ಯೋಗ ಕಡಿತ ಆಗಿರಲಿಲ್ಲ. ಕೇವಲ ಕಾರ್ಯಕ್ಷಮತೆ ಆಧಾರದ ಮೇಲಷ್ಟೇ ಉದ್ಯೋಗ ಕಡಿತ ಮಾಡಲಾಗುತ್ತಿತ್ತು. ಆದ್ರೆ ಇದೀಗ ನಡೆಯುತ್ತಿರುವ ಉದ್ಯೋಗ ಕಡಿತ ಬೇರೆಯದೇ ರೀತಿಯಲ್ಲಿ ಕಂಡು ಬರ್ತಿದೆ. ಹಾಗೆ ನೋಡಿದ್ರೆ, ಐಟಿ ಉದ್ಯಮದಲ್ಲಿ ಇತ್ತೀಚೆಗೆ ಉದ್ಯೋಗ ಕಡಿತ ಸಹಜವಾಗ್ತಿದೆ.ಸಂಸ್ಥೆಗಳು ಬಹುಮುಖ ಪ್ರತಿಭೆಯುಳ್ಳ ನೌಕರರ ಹುಡುಕಾಟ ನಡೆಸುತ್ತಿದೆ. ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದಕತೆ ನೀಡುವ ಉದ್ದೇಶವನ್ನು ಹೊಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…