News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

73

ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ.

ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹಂತ 3, 4, ಹಾಗೂ 5ರಲ್ಲಿ ಬರುವ ಉದ್ಯೋಗಿಗಳ ಪೈಕಿ ಶೇ. 2-5ರಷ್ಟು ನೌಕರರೂ ಕೂಡಾ ಕೆಲಸ ಕಳೆದುಕೊಳ್ಳಲಿದ್ದಾರೆ. ಇನ್ಫೋಸಿಸ್ನಲ್ಲಿ ಸದ್ಯ ಮಧ್ಯಮ ಕ್ರಮಾಂಕದಲ್ಲಿ ಸರಿಸುಮಾರು 1 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ.2 ರಿಂದ 5ರಷ್ಟು ಮಂದಿಯನ್ನು ಸಂಸ್ಥೆ ಕೆಲಸದಿಂದ ಕಿತ್ತುಹಾಕಲು ಹೊರಟರೆ, ಸುಮಾರು 4 ರಿಂದ10 ಸಾವಿರ ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ.

ಅಷ್ಟೇ ಅಲ್ಲ, ಹಿರಿಯ ಕಾರ್ಯನಿರ್ವಾಹಕ ಹುದ್ದೆಯಡಿ ಬರುವ ಸಹಾಯಕ ಉಪಾಧ್ಯಕ್ಷರು,ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಿಗೂ ಕೆಲಸ ಬಿಡುವಂತೆ ಇನ್ಫೋಸಿಸ್ ಹೇಳಿದೆ. ಅಂದರೆ ಈ ಹಂತದ ಒಟ್ಟು 50 ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ. ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಇನ್ಫೋಸಿಸ್ ಇದೊಂದು ಆಂತರಿಕ ಪ್ರಕ್ರಿಯೆ ಎಂದು ಹೇಳಿದೆ. ಸಾಮೂಹಿಕವಾಗಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂದು ಪರಿಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟನೆ ನೀಡಿರುವ ಇನ್ಫೋಸಿಸ್, ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿರೋದಾಗಿ ಹೇಳಿದೆ.

ಹಾಗೆ ನೋಡಿದ್ರೆ, ಕಳೆದ ಕೆಲವು ವರ್ಷಗಳಿಂದ ಇನ್ಫೋಸಿಸ್‌ನಲ್ಲಿ ಸಾಮೂಹಿಕ ಉದ್ಯೋಗ ಕಡಿತ ಆಗಿರಲಿಲ್ಲ. ಕೇವಲ ಕಾರ್ಯಕ್ಷಮತೆ ಆಧಾರದ ಮೇಲಷ್ಟೇ ಉದ್ಯೋಗ ಕಡಿತ ಮಾಡಲಾಗುತ್ತಿತ್ತು. ಆದ್ರೆ ಇದೀಗ ನಡೆಯುತ್ತಿರುವ ಉದ್ಯೋಗ ಕಡಿತ ಬೇರೆಯದೇ ರೀತಿಯಲ್ಲಿ ಕಂಡು ಬರ್ತಿದೆ. ಹಾಗೆ ನೋಡಿದ್ರೆ, ಐಟಿ ಉದ್ಯಮದಲ್ಲಿ ಇತ್ತೀಚೆಗೆ ಉದ್ಯೋಗ ಕಡಿತ ಸಹಜವಾಗ್ತಿದೆ.ಸಂಸ್ಥೆಗಳು ಬಹುಮುಖ ಪ್ರತಿಭೆಯುಳ್ಳ ನೌಕರರ ಹುಡುಕಾಟ ನಡೆಸುತ್ತಿದೆ. ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದಕತೆ ನೀಡುವ ಉದ್ದೇಶವನ್ನು ಹೊಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…