ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…