ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()