ಸುದ್ದಿ

ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

146

ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್‌ ಫಾರ್ಮಾಸುಟಿಕಲ್‌ ಎಜುಕೇಷನ್‌ ಆಂಡ್‌ ರಿಸರ್ಚ್‌ ಡೆವಲಪ್‌ಮೆಂಟ್‌ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್‌ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್‌ ( ಚುಚ್ಚದಿರುವ ಪ್ಯಾಚ್‌) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್‌ ಪಾಲಿಮರ್‌ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್‌ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್‌ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.

ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್‌ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್‌ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್‌ ಆಫ್‌ ಅಮೆರಿಕನ್‌ ಅಸೋಸಿಯೇಷನ್‌ ಆಫ್‌ ಫಾರ್ಮಾಸುಟಿಕಲ್‌ ಸೈಂಟಿಸ್ಟ್‌ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…