ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…