ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.
ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.
ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.
ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…