ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…