ಸುದ್ದಿ

ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

36

ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು.

100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ ಅರಾಮ್ಕೊ ಇಚ್ಛಿಸಿರುವುದಕ್ಕೆ ಸಂತಸವಾಗುತ್ತಿದೆ.ಯೋಜನೆ ಪೂರ್ಣಗೊಂಡರೆ ಏಷ್ಯಾದ ಅತಿದೊಡ್ಡ ತೈಲಸಂಸ್ಕರಣಾಘಟಕ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆಎಂದರು.

400 ದಶಲಕ್ಷ ಮಂದಿಗೆ ತರಬೇತಿ: ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಮಾನವಸಂಪನ್ಮೂಲ ಲಭ್ಯವಿದೆ. ಯುವಜನರಲ್ಲಿ ಕೌಶಲ ವೃದ್ಧಿಸಲು ಸ್ಕಿಲ್ಇಂಡಿಯಾ ಯೋಜನೆ ಆರಂಭಿಸಲಾಗಿದ್ದು, ಮುಂದಿನ3-4 ವರ್ಷಗಳಲ್ಲಿ 400 ದಶಲಕ್ಷ ಮಂದಿಗೆ ವಿವಿಧಕ್ಷೇತ್ರಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತದೆ.ಭಾರತದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆಅಗತ್ಯ ಕೌಶಲ ಹೊಂದಿರುವ ಮಾನವಸಂಪನ್ಮೂಲ ದೊರೆಯುತ್ತದೆ ಎಂದು ಹೂಡಿಕೆದಾರರಿಗೆ ಭರವಸೆನೀಡಿದರು.

ಹವಾಮಾನ ಬದಲಾವಣೆ: ಹವಾಮಾನ ವೈಪರೀತ್ಯ ತಡೆಯುವಮಹತ್ವವನ್ನು ಒತ್ತಿ ಹೇಳಿದ ಮೋದಿಶಕ್ತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವವರಿಗೆ ಅಧಿಕಪ್ರಾಶಸ್ತ್ಯ ನೀಡಬೇಕೆಂದರು. ಅನಿಲ ಮತ್ತು ತೈಲಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಬೇಕುಎಂದರು.

ಭಾರತ ಜಗತ್ತಿನ ಮೂರನೇ ಅತಿದೊಡ್ಡಸ್ಟಾರ್ಟಪ್ ರಾಷ್ಟ್ರವಾಗಿದೆ. ಭಾರತದ ಎರಡನೇ ಮತ್ತುಮೂರನೇ ಹಂತದ ನಗರಗಳಲ್ಲೂ ಸ್ಟಾರ್ಟಪ್​ಗಳು ಹುಟ್ಟಿಕೊಳ್ಳುತ್ತಿವೆ. ಭಾರದಸ್ಟಾರ್ಟಪ್​ ಸಂಸ್ಥೆಗಳು ಜಾಗತಿಕವಾಗಿ ಬೆಳೆಯುತ್ತಿದ್ದು, ವಿಶ್ವದ ವಿವಿದೆಡೆ ಹೂಡಿಕೆಮಾಡುವ ಮಟ್ಟಕ್ಕೆ ಬೆಳೆಯುತ್ತಿವೆ. ಭಾರತದ ಸ್ಟಾರ್ಟಪ್​ಗಳಲ್ಲಿಹೂಡಿಕೆ ಮಾಡುವ ಮೂಲಕ ಪ್ರಯೋಜನೆಪಡೆಯುವಂತೆ ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದರು.

ಮೂಲಸೌಕರ್ಯ ಕ್ಷೇತ್ರ ಹೂಡಿಕೆದಾರರ ಸ್ವರ್ಗವಾಗಿದ್ದು,ಒನ್ ನೇಷನ್ ಒನ್ ಪವರ್​ಗ್ರಿಡ್​, ಒನ್​ ನೇಷನ್ ಒನ್ಗ್ಯಾಸ್​​ ಗ್ರಿಡ್, ಒನ್​ ನೇಷನ್ಒನ್ ಆಪ್ಟಿಕಲ್ ಫೈಬರ್ ನೆಟ್ವರ್ಕ್​ ಸೇರಿದಂತೆಇತ್ಯಾದಿ ಯೋಜನೆಗಳು ಹಮ್ಮಿಕೊಂಡಿದ್ದೇವೆ. ಇವುಗಳ ಮೂಲಕ ದೇಶದಮೂಲಸೌಕರ್ಯ ಕ್ಷೇತ್ರವನ್ನು ಸಂಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಮುಂದಿನ ಐದುವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ(5 ಟ್ರಿಲಿಯನ್ ಡಾಲರ್ ) ಗುರಿ ಹೊಂದಲಾಗಿದೆ.ಅಭಿವೃದ್ಧಿಯ ಕಾರ್ಯಗಳ ವೇಗವನ್ನು ಹೆಚ್ಚಿಸಲುಮುಂದಾದಲ್ಲಿ, ಉದಯೋನ್ಮುಖ ಪ್ರವೃತ್ತಿಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ವಿಷನ್ 2030ಗೆ ಸಹಕಾರಿ: ನಮ್ಮ ನೀತಿಗಳಲ್ಲಿ ಸ್ಪಷ್ಟತೆಯಿದ್ದು,ಎಲ್ಲ ಭಾರತೀಯರ ಜೀವನಮಟ್ಟ ಸುಧಾರಿಸುವುದುನಮ್ಮ ಆದ್ಯತೆ. ರಾಜಕೀಯ ಸ್ಥಿರತೆಮತ್ತು ಭಾರತದ ವೈವಿಧ್ಯಮಯ ಮಾರುಕಟ್ಟೆಹೂಡಿಕೆಗೆ ಸೂಕ್ತ ಪ್ರತಿಫಲ ಒದಗಿಸುತ್ತದೆ.ಸೌದಿ ಅರೇಬಿಯಾದ ವಿಷನ್ 2030 ಮತ್ತು ಆರ್ಥಿಕತೆಯನ್ನು ತೈಲಕ್ಷೇತ್ರದ ಮೇಲಿನ ಅವಲಂಬನೆಯಿಂದ ತಪ್ಪಿಸಲುಸಹಕಾರಿ ಎಂದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…