ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

389

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…