ಸುದ್ದಿ

ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

26

ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ.

ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು ಆ ರೀತಿ ಮಾತನಾಡಬಾರದಿತ್ತು ಎಂದು
ಕಿಶನ್ ಹೇಳಿದ್ದಾರೆ . ನನ್ನನ್ನು ಕ್ಷಮಿಸಿ. ಈ ವಿಷಯ ಇಷ್ಟು ದೊಡ್ಡದಾಗುತ್ತೆ ಎಂದು ನನಗೆ ತಿಳಿದಿರಲಿಲ್ಲ. ನಾನು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ ಎಂದು ಹೇಳಿದ್ದಾರೆ.

ಕಿಶನ್ ಮಾತು ಕೇಳಿದ ಜೈ ಜಗದೀಶ್ ಅವರು ನೀನು ನನ್ನನ್ನು ಪ್ರಶ್ನೆ ಮಾಡಬೇಕೆಂದರೆ ಪ್ರತ್ಯೇಕವಾಗಿ ಕರೆದು ಕೇಳಬೇಕಿತ್ತು. ಅದನ್ನು ಬಿಟ್ಟು ಎಲ್ಲರ ಮುಂದೆ ಕೇಳಿ ನನಗೆ ಅವಮಾನ ಮಾಡಿದೆ. ಈಗ ಬಂದು ಕ್ಷಮೆ ಕೇಳುತ್ತಿದ್ದೀಯಾ. ನೀನೂ ಹೀರೋ ಆಗಬೇಕು ಎಂದುಕೊಂಡಿದ್ದೆ, ನಿನ್ನ ಉದ್ದೇಶ ಈಡೇರಿದೆ.

ನಾನು ನಿನ್ನೆಯೇ ಸಾರಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದರೆ ಸೈಡಿಗೆ ಕರೆದು ಹೇಳಬೇಕಾಗಿತ್ತು ಎಂದು ಕಿಶನ್‌ಗೆ ಜೈ ಜಗದೀಶ್ ಹೇಳಿದರು. ಕಿಶನ್ ಕ್ಷಮೆ ಕೇಳುತ್ತಿದ್ದಂತೆ ಮನೆಯಲ್ಲಿದ್ದ ಸದಸ್ಯರು ಎಲ್ಲವನ್ನು ಮರೆತು ಆತನನ್ನು ಕ್ಷಮಿಸಿ ಎಂದು ಜೈ ಜಗದೀಶ್ ಅವರಿಗೆ ಹೇಳಿದ್ದಾರೆ. ಮನೆಯ ಸದಸ್ಯರ ಮಾತು ಕೇಳಿ ಜೈ ಜಗದೀಶ್, ಕಿಶನ್‍ನನ್ನು  ಕ್ಷಮಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ