ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…