ಸುದ್ದಿ

ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

34

ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ.

ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಬಿಲ್ ಗೇಟ್ಸ್ ಈ ಬಾರಿ 105.7 ಬಿಲಿಯನ್ ಡಾಲರ್ ಆಸ್ತಿ ಹೊಂದುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ಅಮೇಜಾನ್​​ ಷೇರು ಬೆಲೆ ಶೇ. 9 ಕುಸಿದು 1624 ಡಾಲರ್​ಗೆ ಅಂತ್ಯಗೊಂಡಿದೆ. ಹಾಗೆಯೇ ಬಿಲ್ ಗೇಟ್ಸ್ ಆಸ್ತಿ ಮೌಲ್ಯ 8800 ಕೋಟಿ ರೂ. ಆಗಿದ್ದು,  ಬೆಜೋಸ್​​ರನ್ನು ಹಿಂದಿಕ್ಕಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ಜೆಫ್​​​ ಮತ್ತು ತನ್ನ ಹೆಂಡತಿ ಮೆಕೆಂಜಿ ಬೆಜೋಸ್​​ ದಾಪಂತ್ಯದಲ್ಲಿ ಬಿರುಕು ಮೂಡಿತ್ತು. ಈ ಬಗ್ಗೆ ಖುದ್ದು ಸ್ವತಃ ಜೆಫ್ ಮತ್ತು ಅವರ ಮಾಜಿ ಪತ್ನಿಯೇ ಜಂಟಿಯಾಗಿ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದು, ಡಿವೋರ್ಸ್​​ ಪಡೆದುಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದರು. ಅಲ್ಲದೇ ನಮ್ಮ ದಾಂಪತ್ಯ ಜೀವನದ ಬೆಳವಣಿಗೆ ಬಗ್ಗೆ ಜನರಿಗೆ ಮಾಹಿತಿ ಇರಲಿ. ನಾನು ಜೆಫ್​​​ ಕಳೆದ 25 ವರ್ಷಗಳಿಂದ ದಾಂಪತ್ಯ ಜೀವನ ನಡೆಸುತ್ತಿದ್ದೇವೆ. ಈಗ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ ಗೆಳೆಯರಾಗಿರಲು ನಿರ್ಧರಿಸಿದ್ದೇವೆ. ಇಷ್ಟು ದಿನ ದಂಪತಿಗಳಾಗಿ ನಾವಿಬ್ಬರೂ ವೈವಾಹಿಕ ಜೀವನ ಸಂತೋಷದಿಂದ ಕಳೆದಿದ್ದೇವೆ ಎಂದು ತಿಳಿಸಿದ್ದರು ಮೆಕೆಂಜಿ ಬೆಜೋಸ್.

2018ರಲ್ಲಿ ಅಮೇಜಾನ್​​ ಕಂಪನಿಯ ಸಂಸ್ಥಾಪಕ ಜೆಫ್​​, ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿಯಾಗಿದ್ದರು. ಜೆಫ್ ಒಟ್ಟು 137 ಬಿಲಿಯನ್ ಡಾಲರ್ (9,67,289 ಕೋಟಿ ರೂ.) ಮೌಲ್ಯದ ಸಂಪತ್ತು ಹೊಂದಿದ್ದರು. ಆರಂಭದಲ್ಲಿ ಅಮೇಜಾನ್​​ ಕಂಪನಿಯಲ್ಲಿಯೇ ಮೆಕೆಂಜಿ ಬೆಜೋಸ್​​​ ಉದ್ಯೋಗಿಯಾಗಿದ್ದರು. ನಂತರ 2014ರಲ್ಲಿ ಬೈಸ್ಟಾಂಡರ್ ರಿವೊಲ್ಯೂಶನ್ ಎಂಬ ಸಂಸ್ಥೆ ಆರಂಭಿಸಿ ಶ್ರಮಿಸಿತ್ತು ಈ ದಂಪತಿ. ಜೆಫ್​​ ಈಗಾಗಲೇ ತಮ್ಮ ಪತ್ನಿ ಮೆಕೆಂಜಿ ಬೆಜೋಸ್ ಗೆ ವಿಚ್ಛೇದನ ನೀಡಿದ್ದಾರೆ. ಹಾಗೆಯೇ ಪತ್ನಿಗೆ ಜೆಫ್​ ಅವರು ನೀಡಿರುವ ಜೀವನಾಂಶ ಬರೋಬ್ಬರಿ 69 ಶತಕೋಟಿ ಡಾಲರ್​. ಜೆಫ್​ ಅವರು ತಮ್ಮ ಸ್ನೇಹಿತರ ಪತ್ನಿ ಜತೆ ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿಯೇ ಮೆಕೆಂಜಿ ಜೆಫ್​​ಗೆ ವಿಚ್ಛೇದನ ನೀಡಲಾಗಿದೆ ಎನ್ನಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.