ಸುದ್ದಿ

ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

72

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್‍ಲೈನ್‍ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್‍ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್‍ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್‍ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್‍ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್‍ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್‍ನೆಟ್ ಸೇವೆಗಳು ಆಪ್ಟಿಕಲ್ ನೆಟ್‍ವರ್ಕ್ ಟರ್ಮಿನಲ್ (ಒಎನ್‍ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್‍ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ