ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…