ಸುದ್ದಿ

ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

73

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್‍ಲೈನ್‍ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್‍ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್‍ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್‍ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್‍ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್‍ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್‍ನೆಟ್ ಸೇವೆಗಳು ಆಪ್ಟಿಕಲ್ ನೆಟ್‍ವರ್ಕ್ ಟರ್ಮಿನಲ್ (ಒಎನ್‍ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್‍ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….