News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

40

ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ.

ಇತರೆ ಜಿಯೋ ಫೋನ್‌ಗಳು ಮತ್ತು ಲ್ಯಾಂಡ್‌ಲೈನ್‌ಗಳಲ್ಲಿ ಜಿಯೋ ಬಳಕೆದಾರರು ಮಾಡುವ ಕರೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಅಂತೆಯೇ, ವಾಟ್ಸ್​ಆ್ಯಪ್, ಫೇಸ್ ಟೈಮ್ ಮತ್ತು ಇತರ ಪ್ಲ್ಯಾಟ್‌ಫಾರ್ಮ್‌ಗಳ ಮೂಲಕ ಮಾಡಿದ ಕರೆಗಳಿಗೆ ಈ ಶುಲ್ಕ ವಿಧಿಸಲಾಗುವುದಿಲ್ಲ. ಹಾಗೆಯೇ ಇತರೆ ನೆಟ್‌ವರ್ಕ್‌ಗಳಿಂದ ಒಳಬರುವ ಕರೆಗಳು ಮೊದಲಿನಂತೆ ಉಚಿತವಾಗಿರಲಿದೆ ಎಂದು ತಿಳಿಸಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) 2017 ರ ಇಂಟರ್​ಕನೆಕ್ಟ್​ ಬಳಕೆ ಶುಲ್ಕವನ್ನು (ಐಯುಸಿ) ನಿಮಿಷಕ್ಕೆ 14 ಪೈಸೆಗಳಿಂದ 6 ಪೈಸೆಗಳಿಗೆ ಇಳಿಸಿತ್ತು. ಹಾಗೆಯೇ ಈ ಶುಲ್ಕವನ್ನು 2020 ರ ಜನವರಿಯ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿತ್ತು. ಆದರೆ ಈಗ TRAI ಈ ಗಡುವನ್ನು ವಿಸ್ತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

2015 ರಿಂದ ಜಿಯೋ ಉಚಿತ ಕರೆ ಸೌಲಭ್ಯವನ್ನು ಒದಗಿಸುತ್ತಿದೆ. ಇದರಿಂದ  ಕಳೆದ ಮೂರು ವರ್ಷಗಳಲ್ಲಿ ಇತರ ಮೊಬೈಲ್ ಆಪರೇಟರ್‌ಗಳಾದ ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾಗಳಿಗೆ ಐಯುಸಿ ಶುಲ್ಕವಾಗಿ ಜಿಯೋ ಟೆಲಿಕಾಂ ಸಂಸ್ಥೆ ಸುಮಾರು 13,500 ಕೋಟಿ ರೂಪಾಯಿಗಳನ್ನು ಪಾವತಿಸಿದೆ.ಈ ನಷ್ಟದ ಮೊತ್ತವನ್ನು ಸರಿದೂಗಿಸಲು ಅನ್ಯ ನೆಟ್​ವರ್ಕ್​ಗಳಿಗೆ ಮಾಡುವ ವಾಯ್ಸ್ ಕರೆಗಳಿಗೆ ದರ ವಿಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗೆ ವಿಧಿಸಲಾಗುವ ದರಕ್ಕೆ ಸಮನಾಗಿ ಡೇಟಾವನ್ನು ಜಿಯೋ ಉಚಿತವಾಗಿ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಉಪಯುಕ್ತ ಮಾಹಿತಿ

    ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

    ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading