News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

81

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್‍ಲೈನ್‍ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್‍ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್‍ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್‍ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್‍ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್‍ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್‍ನೆಟ್ ಸೇವೆಗಳು ಆಪ್ಟಿಕಲ್ ನೆಟ್‍ವರ್ಕ್ ಟರ್ಮಿನಲ್ (ಒಎನ್‍ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್‍ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…