ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…