News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

81

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್‍ಲೈನ್‍ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್‍ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್‍ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್‍ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್‍ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್‍ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್‍ನೆಟ್ ಸೇವೆಗಳು ಆಪ್ಟಿಕಲ್ ನೆಟ್‍ವರ್ಕ್ ಟರ್ಮಿನಲ್ (ಒಎನ್‍ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್‍ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…