ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…