ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.