ಉಪಯುಕ್ತ ಮಾಹಿತಿ

ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

325

ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. 
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್​ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್‌ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.

ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ. 

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.

ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್‌ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.

ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…