ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತಿ ಮಾಡಿಕೊಳ್ಳುತ್ತವೆ. ಅವುಗಳನ್ನು ತೊಡೆದುಹಾಕುವುದು ಕೂಡ ಅಷ್ಟು ಸುಲಭವಲ್ಲ. ಏಕೆಂದರೆ ಇಂದಿನ ಮಾಡ್ಯುಲರ್ ಅಡಿಗೆ ಮನೆಗಳಲ್ಲಿ ಅವರು ಸಾಕಷ್ಟು ಮರೆಮಾಚುವ ಸ್ಥಳಗಳನ್ನು ಕೀಟಗಳು ಬಹಳ ಸುಲಭವಾಗಿ ವಾಸಸ್ಥಾನವಾಗಿಸುತ್ತದೆ. ಕತ್ತಲೆ ಹೊಂದಿರುವ ಜಾಗ ಮತ್ತು ನೀರಿನ ಸಿಂಕ್ನಿಂದ ತೇವಾಂಶ ಹೊಂದಿರುವ ಸ್ಥಳಗಳು ಜಿರಳೆಗಳಿಗೆ ಅನುಕೂಲಕರವಾಗಿರುತ್ತದೆ.
ಜಿರಳೆಗಳನ್ನು ಹೋಗಲಾಡಿಸಲು ಮಾರುಕಟ್ಟೆಯಲ್ಲಿ ಅನೇಕ ಕೀಟನಾಶಕಗಳಿದ್ದರೂ, ಅವುಗಳ ಬಳಕೆಯಿಂದ ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಅಲರ್ಜಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಅವುಗಳನ್ನು ಹೇಗೆ ತೊಡೆದುಹಾಕಬೇಕು ಎಂದು ನಾವು ನಿಮಗೆ ತಿಳಿಸುತ್ತೇವೆ.

ಬೇವಿನ ಎಲೆಗಳ ಬಳಕೆ : ಅಡುಗೆಮನೆಯಲ್ಲಿ ಜಿರಳೆಗಳನ್ನು ಹೋಗಲಾಡಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಬೇವಿನ ಎಲೆಗಳ ಬಳಕೆ. ಅಡುಗೆಮನೆಯ ವಿವಿಧ ಮೂಲೆಗಳಲ್ಲಿ ಬೇವಿನ ಎಲೆಗಳನ್ನು ಅರೆದು ಇಟ್ಟುಬಿಡಿ. ಇದರ ಸುಗಂಧದಿಂದ ಜಿರಳೆಗಳು ಓಡಿಹೋಗುತ್ತವೆ. ಹಾಗೆಯೇ ಇದನ್ನು ಬದಲಾಯಿಸುತ್ತಿದ್ದರೆ ಜಿರಳೆಗಳು ಸಮಸ್ಯೆ ಇರುವುದಿಲ್ಲ.
ಲವಂಗಗಳ ಬಳಕೆ : ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಬೋರಿಕ್ ಪೌಡರ್ ಮತ್ತು ಸಕ್ಕರೆಯ ಮಿಶ್ರಣ : ಬೋರಿಕ್ ಪುಡಿ ಮತ್ತು ಸಕ್ಕರೆಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಿರಲೆಗಳಿರುವ ಮೂಲೆಗಳಲ್ಲಿ ಇರಿಸಿ. ವಿಶೇಷವಾಗಿ ಹೆಚ್ಚು ಕತ್ತಲೆ ಮತ್ತು ತೇವಾಂಶ ಇರುವ ಸ್ಥಳಗಳಲ್ಲಿ ಈ ಮಿಶ್ರಣವನ್ನು ಹಾಕಿದರೆ ಜಿರಲೆಗಳು ಓಡಿ ಹೋಗುತ್ತವೆ.
ಬೇವಿನ ಬಳಕೆ : ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ರಾತ್ರಿಯ ವೇಳೆ ಅಡುಗೆಮನೆಯಲ್ಲಿ ಮತ್ತು ಒದ್ದೆಯಾದ ಸ್ಥಳದಲ್ಲಿ ಬೇವಿನ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಲೆಗಳು ಬರುವುದಿಲ್ಲ. ದಿನ ಕಳೆದಂತೆ ಇದೇ ಕ್ರಮವನ್ನು ಪುನರಾವರ್ತಿಸುತ್ತಿದ್ದರೆ ಜಿರಲೆ ಸಮಸ್ಯೆ ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…