News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಜ್ಯೋತಿಷ್ಯ

ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

119

ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ….

ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು.

ಮೇಷ…

ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.

ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.

ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….

ವೃಷಭ…

ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.

ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.

ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.

ಮಿಥುನ…

ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.

ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.

ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಕರ್ಕಾಟಕ…

ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.

ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.

ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.

ಸಿಂಹ…

ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.

ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.

ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.

ಕನ್ಯಾ…

ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.

ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.

ತುಲಾ…

ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.

ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.

ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ವೃಶ್ಚಿಕ…

ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.

ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.

ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.

ಧನಸ್ಸು…

ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.

ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.

ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.

ಮಕರ…

ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.

ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.

ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಕುಂಭ…

ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.

ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.

ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.

ಮೀನ…

ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.

ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.

ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …