ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ….
ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು.

ಮೇಷ…
ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….
ವೃಷಭ…
ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.
ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.
ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.
ಮಿಥುನ…
ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.
ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.
ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಕರ್ಕಾಟಕ…
ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.
ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.
ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.
ಸಿಂಹ…
ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.
ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.
ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.
ಕನ್ಯಾ…
ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.
ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.
ತುಲಾ…
ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.
ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.
ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ವೃಶ್ಚಿಕ…
ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.
ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.
ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.
ಧನಸ್ಸು…
ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.
ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.
ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.
ಮಕರ…
ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.
ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.
ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಕುಂಭ…
ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.
ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.
ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.
ಮೀನ…
ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.
ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.
ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…