ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ….
ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು.

ಮೇಷ…
ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ವಯಸ್ಕರಿಗೆ: ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಹಿರಿಯರಿಗೆ: ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ….
ವೃಷಭ…
ಯುವಜನರಿಗೆ: ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುತ್ತೀರಿ. ಹೊಸ ವಿಷಯಗಳತ್ತ ಹುಸಿ ಹುರುಪು ಬೇಡ.
ವಯಸ್ಕರಿಗೆ: ದಾಂಪತ್ಯದಲ್ಲಿನ ವಿರಸ ಮಾನಸಿಕ ಆರೋಗ್ಯ ಕೆಡಿಸುತ್ತದೆ. ನ್ಯಾಯಾಲಯಲ್ಲಿ ಗೆಲವು.
ಹಿರಿಯರಿಗೆ: ಹಣದ ಬಗ್ಗೆ ಎಚ್ಚರದಿಂದ ಇರಿ. ಆರೋಗ್ಯದ ತಪಾಸಣೆಯಿಂದ ಒಳ್ಳೆಯದಾಗುತ್ತದೆ. ಭಯ ನಿವಾರಣೆ ಸಾಧ್ಯ.
ಮಿಥುನ…
ಯುವಜನರಿಗೆ: ವೃತ್ತಿ ಶಿಕ್ಷಣದ ಕೊನೆಯ ಹಂತದಲ್ಲಿದ್ದೀರಿ. ಇದುವರೆವಿಗೂ ಎದುರಾಗುತ್ತಿದ್ದ ನೆನಪಿನ ಸಮಸ್ಯೆಗಳು ಬದಲಾಗುವ ಸೂಚನೆಗಳಿವೆ.
ವಯಸ್ಕರಿಗೆ: ನಿವೃತ್ತಿಯ ಅಂಚಿನಲ್ಲಿದ್ದೀರಿ. ಮುಂದಿನ ದಿನಗಳ ಬಗ್ಗೆ ಕೊಂಚ ಕಾಳಜಿಯಿಂದ ಯೋಚಿಸಿ. ಕುಡಿತದಿಂದ ಅಪಾಯ.
ಹಿರಿಯರಿಗೆ: ಮನೆಮಂದಿಯೊಂದಿಗೆ ಮುನಿಸಿಕೊಂಡರೆ ನಿಮಗೆ ತೊಂದರೆ. ಗತಿಸಿದ ಬಾಳ ಸಂಗಾತಿಯ ಬಗ್ಗೆ ತುಂಬಾ ಯೋಚನೆ ಬೇಡ.

ಕರ್ಕಾಟಕ…
ಯುವಜನರಿಗೆ: ಸೋಲು ಸತತವಾಗಿ ಬರುತ್ತಿರುವುದರಿಂದ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಎದ್ದಿವೆ. ಯಶಸ್ಸಿಗೆ ಬಹಳ ಹತ್ತಿರದಲ್ಲಿದ್ದೀರಿ ಎನ್ನುವುದನ್ನು ನಂಬಿ ಮುನ್ನುಗ್ಗಿ.
ವಯಸ್ಕರಿಗೆ: ನಿಮ್ಮಂತೆಯೇ ನಿಮ್ಮ ಮಕ್ಕಳು ಬೆಳೆಯಬೇಕೆಂಬ ಹಠ ಬೇಡ. ನೀವು ನಿಮ್ಮ ಯಶಸ್ಸಿನ ಕಡೆ ಗಮನ ಹರಿಸಿ. ನಿಮ್ಮ
ಚಟವೊಂದು ಕುಟುಂಬದ ಶಾಂತಿಯನ್ನು ಕೆದಡಲಿದೆ.
ಹಿರಿಯರಿಗೆ: ಭೂತದ ಆರಾಧಕರಿಂದ ದೂರವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ.
ಸಿಂಹ…
ಯುವಜನರಿಗೆ: ಸದಾ ಒಂದಲ್ಲಾ ಒಂದು ತೊಂದರೆಗೆ ಸಿಕ್ಕಿಕೊಳ್ಳುವುದಕ್ಕೆ ನಿಮ್ಮ ಮೊಂಡುತನ ಕಾರಣ. ಇಂದು ಇದರ ಸಲುವಾಗಿಯೇ ಹಿಂಸೆಗೆ ಒಳಗಾಗುತ್ತೀರಿ.
ವಯಸ್ಕರಿಗೆ: ಕುಟುಂಬದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳದಿರುವುದರಿಂದಾಗಿಯೇ ಜಗಳ-ಕದನ. ಸಾಲಗಾರರಿಂದ ಹಿಂಸೆ ಹೆಚ್ಚಾಗಲಿದೆ.
ಹಿರಿಯರಿಗೆ: ನೀವು ನೆನೆಪಿನ ಶಕ್ತಿ ಹೀನತೆಯ ಬಗ್ಗೆ ಗಮನ ಹರಿಸದಿರುವುದರಿಂದಾಗಿ ತಪ್ಪು ಅಭಿಪ್ರಾಯಗಳು ಹೆಚ್ಚಾಗುತ್ತಿವೆ ತಜ್ಙ ವೈದ್ಯರ ಸಲಹೆ ಉಪಯುಕ್ತ.
ಕನ್ಯಾ…
ಯುವಜನರಿಗೆ: ನೀವು ಇರುವ ಸಧ್ಯದ ಪರಿಸ್ಥಿತಿಯಲ್ಲಿ ಹೊಸ ದಾರಿಗಳನ್ನು ಆರಿಸುವ ಮನಸ್ಸು ಪ್ರಬಲ. ನಿಮಗಿರುವ ಚಂಚಲ ಮನಸ್ಸುನನ್ನು ಬದಲಾಯಿಸಿಕೊಳ್ಳಿ.
ವಯಸ್ಕರಿಗೆ: ಹೀಗೆ ಬಾಳ ಸಂಗಾತಿಯ ಆಯ್ಕೆಯನ್ನು ಒಂದಲ್ಲಾ ಒಂದು ಕಾರಣದಿಂದ ಮುಂದು ಹಾಕುವುದ ಸರಿಯಲ್ಲ ಇದು ಸಮಸ್ಯೆಗಳನ್ನು ಹೆಚ್ಚಿಸುತ್ತದೆ.
ಹಿರಿಯರಿಗೆ: ವಯಸ್ಸಾದ ಮಕ್ಕಳನ್ನು ನಿಮ್ಮ ಆಧೀನದಲ್ಲಿ ಇರಿಸಿಕೊಳ್ಳುವುದರಿಂದ ನಿಮಗೂ ಒಳ್ಳೆಯದಲ್ಲ, ಇದನ್ನು ತಡೆಯುವುದರತ್ತ ಗಮನ ಹರಿಸಿ.
ತುಲಾ…
ಯುವಜನರಿಗೆ: ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯತ್ತ ಒಗೆಯುವ ಸ್ವಭಾವ ನಿಮ್ಮದು. ಇಂದದು ಅಪಾಯದ ಮಟ್ಟ ಮುಟ್ಟಲಿದೆ.
ವಯಸ್ಕರಿಗೆ: ಒಂಟಿ ತಾಯಿ ಆಗಿ ಮಕ್ಕಳನ್ನು ಬೆಳೆಸುತ್ತಿರುವುದು ಕಷ್ಟದ ಕೆಲಸ. ಆದರೂ ದೃಢ ಮನಸ್ಸಿನಿಂದ ಮುಂದುವರೆಯರಿ.
ಹಿರಿಯರಿಗೆ: ಒಡ ಹುಟ್ಟಿದವರ ಬಗ್ಗೆ ಇನ್ನೆಷ್ಟು ದಿನ ಈರ್ಷ್ಯೆ ವ್ಯಕ್ತಪಡಿಸುವಿರಿ. ಇದು ನಿಮ್ಮ ಮನೋಬಲವನ್ನು ಹಿಂಡುತ್ತದೆ. ಇಂದು ಎಚ್ಚರದಿಂದ ಅತ್ತ ಗಮನಿಸಿ.

ವೃಶ್ಚಿಕ…
ಯುವಜನರಿಗೆ: ನಿಮ್ಮ ಕ್ರೀಡಾಪಟುತ್ವ ಇಂದು ಮುಖ್ಯ ಪರೀಕ್ಷೆಯನ್ನು ಎದುರಿಸಲಿದೆ. ಗುರಿಯತ್ತ ಮಾತ್ರವಷ್ಟೇ ಗಮನವಿರಲಿ.
ವಯಸ್ಕರಿಗೆ: ಇಷ್ಟ ಪಟ್ಟವರನ್ನು ಮದುವೆಯಾಗುವ ನಿಮ್ಮ ಮಗಳ ಬಗ್ಗೆ ನಿಶ್ಚಿಂತೆ ಇಂದ ಇರುವುದೇ ಸರಿ. ಹಲವಾರು ವರ್ಷಗಳ ಹಿಂದೆ ನೀವೂ ಕೂಡ ಅದನ್ನೇ ಮಾಡಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ.
ಹಿರಿಯರಿಗೆ: ಇಳಿ ವಯಸ್ಸಿನಲ್ಲಿ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.
ಧನಸ್ಸು…
ಯುವಜನರಿಗೆ: ನಿಮ್ಮ ಪೋಷಕರ ಸಂಬಂಧಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ನಿಮ್ಮ ನಕಾರಾತ್ಮಕ ಭಾವನೆಗಳು ಕಡಿಮೆಯಾಗುವುದಿಲ್ಲ.
ವಯಸ್ಕರಿಗೆ: ನಿಮ್ಮ ಸ್ವಭಾವ ಎಲ್ಲರನ್ನು ನಂಬುವಂತಹದ್ದು. ಅದನ್ನು ಬದಲಾಯಿಸುವ ಪ್ರಸಂಗ ಎದುರಾಗಲಿದೆ.
ಹಿರಿಯರಿಗೆ: ವಯೋಮಾನಕ್ಕೆ ಅನುಗುಣವಾದ ನಡೆ ನುಡಿ ನಿಮ್ಮಲ್ಲಿ ಇಲ್ಲವೆನ್ನುವುದನ್ನು ನೆನಪಿಗೆ ತರುವ ದಿನಗಳು ಮುಂದೆ ಬರಲಿವೆ.
ಮಕರ…
ಯುವಜನರಿಗೆ: ಹೆಣ್ಣು ಎನ್ನುವ ಕಾರಣದಿಂದ ಎಲ್ಲದರ ಬಗ್ಗೆ ಮುಜುಗರ ಬೇಡ. ನಿಮಗೆ ಇಷ್ಟವಾದದನ್ನು ಪಡೆಯುವುದರತ್ತ ಹೆಚ್ಚು ಗಮನ ಇರಲಿ.
ವಯಸ್ಕರಿಗೆ: ನೀವು ವೃತ್ತಿಯಲ್ಲಿದ್ದುಕೊಂಡೇ ಉನ್ನತ ಪದವಿಯ ಶಿಕ್ಷಣ ಮುಂದುವರೆಸಿ. ಯಶಸ್ಸು, ಕೀರ್ತಿ ಅದರ ಹಿಂದೆ ತಾನಾಗಿಯೇ ಬರುವುದು.
ಹಿರಿಯರಿಗೆ: ಸಾವಿನ ಬಗ್ಗೆ ಅಷ್ಟೊಂದು ಆಲೋಚಿಸಿ ಪ್ರಯೋಜನವಿಲ್ಲ. ಮುಂದಾಗುವುದರ ಮುನ್ಸೂಚನೆ ಇದ್ದರೂ ಆ ಬಗ್ಗೆ ಆತಂಕ, ಅಂಜಿಕೆ ಬೇಡ.

ಕುಂಭ…
ಯುವಜನರಿಗೆ: ನಿಮ್ಮ ಒಳಮುಖದ ಸ್ವಭಾವದಿಂದ ಅನಗತ್ಯವಾಗಿ ಕಿರಿಕಿರಿ ಎದುರಿಸುತ್ತೀರಿ. ಇದರಿಂದಾಗಿಯೇ ನಿಕಟವಾಗಲಿದ್ದ ಸಂಬಂಧವೊಂದಕ್ಕೆ ಹಿನ್ನಡೆ. ಕೋಪ-ತಾಪದಿಂದ ಹಾನಿಯಾಗುವುದು.
ವಯಸ್ಕರಿಗೆ: ಮಕ್ಕಳಿಂದ ತುಂಬಾ ನಿರೀಕ್ಷಿಸುತ್ತೀರಿ. ಇದು ಸಂಯಮ ಕೆಡಿಸುತ್ತದೆ. ವೃತ್ತಿಯಲ್ಲಿ ಕಿರಿಕಿರಿ; ಮೆಚ್ಚುಗೆಯ ಮಾತುಗಳನ್ನು ಆಡುವುದರಿಂದ ಬಿಟ್ಟು ಹೋಗಿದ್ದ ಸಂಬಂಧವೊಂದು ಗಟ್ಟಿಯಾಗುತ್ತದೆ.
ಹಿರಿಯರಿಗೆ: ಆರೋಗ್ಯದ ಬಗ್ಗೆ ತವಕ ಬೇಡ. ಇಷ್ಟ ದೇವತಾ ಸ್ಮರಣೆ ನಿಷ್ಠೆಯಿಂದ ಮಾಡಿ. ಮಕ್ಕಳ ಸೋಲಿನ ಬಗ್ಗೆ ಆತಂಕ ಪಡುವುದರಿಂದ ನಿದ್ದೆ ಕೆಡಿಸಿಕೊಳ್ಳುತ್ತೀರಿ.
ಮೀನ…
ಯುವಜನರಿಗೆ: ಸಾಮಾಜಿಕ ಜಾಲತಾಣವನ್ನು ನಂಬಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತೀರಿ. ಕೆಡಕು ಮಾಡುವ ಮನಸ್ಸು ಬಿಡಿ.
ವಯಸ್ಕರಿಗೆ: ಕರ್ತವ್ಯ ಮಾಡುವ ಮನಸ್ಸನ್ನು ಬೆಳಸಿಕೊಳ್ಳದಿದ್ದರೇ ಅವಕಾಶಗಳು ಕೈ ತಪ್ಪುತ್ತದೆ. ಸಂಗಾತಿಯ ಬಗ್ಗೆ ಸಂಶಯ ಬೇಡ.
ಹಿರಿಯರಿಗೆ: ಹಳೆಯದನ್ನು ಎಷ್ಟು ನೆನಪಿಸಿಕೊಂಡರೂ ಪ್ರಯೋಜನವಿಲ್ಲ. ತಪ್ಪದೇ ವ್ಯಾಯಮ ಮಾಡಿ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…