News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

112

ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಆಧ್ಯಾತ್ಮ

    ಶ್ರೀ ಲಲಿತಾಸಹಸ್ರನಾಮ ಸ್ತೋತ್ರಂ ಅರ್ಥ

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.