ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…