ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.