News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

107

ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….