News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ, ಸುದ್ದಿ

ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

154

ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ.  ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…