ಸಿನಿಮಾ, ಸುದ್ದಿ

ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

153

ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ.  ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…