ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ. ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…