ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ. ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…