ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…