ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…