ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.