ಆರೋಗ್ಯ, ಉಪಯುಕ್ತ ಮಾಹಿತಿ

ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

61

ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್​, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್​ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್​ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್​ ಸಿ ಉಪಯೋಗಕಾರಿ .

Ripe cashew nuts in woman’s hands

ಗೋಡಂಬಿಯ ನಾಲ್ಕು ಪ್ರಯೋಜನಗಳು

ಸಹಾಯಕವಾದ ಫೈಬರ್‌ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್‌ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.

ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್‌ಡಿಎಲ್‌ ಕೊಲೆಸ್ಟರಾಲ್‌ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್‌ಡಿಎಲ್‌ ಕೊಲೆಸ್ಟರಾಲ್‌ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.

ನಿಮ್ಮ ಚರ್ಮಕ್ಕೆ ಒಳ್ಳೆಯದು

ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್‌ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್‌ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…