ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .

ಸಹಾಯಕವಾದ ಫೈಬರ್ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…