News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

119

ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್‌ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್‌ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…